Scholarship: SSLC ಮತ್ತು PUC ಪಾಸಾದವರಿಗೆ ಸಹಾಯಧನ ಸಿಗುತ್ತೆ! ಈಗಲೇ ಅರ್ಜಿ ಸಲ್ಲಿಸಿ!
ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ವಿಶೇಷವಾದ ಸಹಾಯಧನವನ್ನು ನೀಡಲು ಅರ್ಜಿಯನ್ನು ಆಹ್ವಾನಿಸಿದೆ. ಪ್ರಥಮ ಪ್ರಯತ್ನದಲ್ಲಿ ಪಾಸಾಗಿರುವಂತಹ ವಿದ್ಯಾರ್ಥಿಗಳು ಈ ಪ್ರಯೋಜನವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂಬ ಮಾಹಿತಿ ತಿಳಿದು ಬಂದಿದೆ.
10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರವು ಈ ವಿಶೇಷವಾದ ಪ್ರೋತ್ಸಾಹ ಧನವನ್ನು ನೀಡುತ್ತಿದ್ದು ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಪೂರ್ತಿ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ.
ಅರ್ಜಿ ಸಲ್ಲಿಸಲು ಯಾರು ಅರ್ಹರು?
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ಪಾಸ್ ಆದ ವಿದ್ಯಾರ್ಥಿಗಳು. ದ್ವಿತೀಯ ಪಿಯುಸಿ ಎಲ್ಲಿಯೂ ಕೂಡ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರುವ ವಿದ್ಯಾರ್ಥಿಗಳಿಗೆ ಅವಕಾಶ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದವರಿಗೆ ಮಾತ್ರ ಅವಕಾಶ. ಬೇರೆ ರಾಜ್ಯದಲ್ಲಿ ಅಧ್ಯಯನ ಮಾಡಿದ್ದರೆ ಅರ್ಹರು ಮತ್ತು ಹೊರದೇಶದಲ್ಲಿ ಅಧ್ಯಯನ ಮಾಡಿದರೆ ಅರ್ಹರಲ್ಲ.
ಬೇಕಾಗುವ ದಾಖಲೆಗಳು:
- ಜಾತಿ ಪ್ರಮಾಣ ಪತ್ರ
- 10ನೇ ತರಗತಿ ಅಂಕಪಟ್ಟಿ/ದ್ವಿತೀಯ ಪಿಯುಸಿ ಅಂಕ ಪಟ್ಟಿ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ಪಾಸ್ಪೋರ್ಟ್ ಅಳಿತೆಯ ಭಾವಚಿತ್ರಗಳು
- ಆಧಾರ್ ಕಾರ್ಡ್
ಅರ್ಜಿ ಸಲ್ಲಿಸುವುದು ಹೇಗೆ?
ಈ ವಿಶೇಷವಾದ ಪ್ರೋತ್ಸಾಹ ಧನಕ್ಕೆ ನೀವೇನಾದರೂ ಅರ್ಜಿ ಸಲ್ಲಿಸಲು ಬಯಸಿದರೆ ಈ ಕೆಳಗಿನವಂತಹ ಅಧಿಕೃತ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವಂತಹ ಲಿಂಕ್ ಈ ಕೆಳಗಡೆ ನೀಡಲಾಗಿದೆ ನೋಡಿ.
ಅರ್ಜಿ ಲಿಂಕ್
ಮೇಲೆ ನೀಡಿರುವಂತಹ ಅಧಿಕೃತ ಜಾಲತಾಣವನ್ನು ಬಳಸಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ತಿಳಿದಿರುವಂತಹ ಸಂದರ್ಭದಲ್ಲಿ ನಿಮ್ಮ ಹತ್ತಿರವಿರುವ ಆನ್ಲೈನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.